- Advertisement -
- Advertisement -
ಶಿವಮೊಗ್ಗ; ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಾಯಿಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಕಳೆದ ವಾರ ತೀರ್ಥಹಳ್ಳಿಯ ಇಬ್ಬರು ಮುಸ್ಲಿಂ ಯುವಕರ ಮನೆ ಮೇಲೆ ಎನ್ ಐ ಎ ದಾಳಿ ಮಾಡಿತ್ತು. ಆ ಇಬ್ಬರು ಯುವಕರ ಜೊತೆ ಸಾಯಿಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆ, ಸಾಯಿಪ್ರಸಾದ್ನನ್ನು ಎನ್ಐಎ ಅಧಿಕಾರಿಗಳು
ವಿಚಾರಣೆಗೆ ಕರೆದೊಯ್ದಿದ್ದಾರೆ.
- Advertisement -