Tuesday, April 30, 2024
Homeಕರಾವಳಿಬೆಳ್ಳಾರೆ. : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇಬ್ಬರನ್ನು ವಶಕ್ಕೆ ಪಡೆದ ಎನ್.ಐ.ಎ ತಂಡ

ಬೆಳ್ಳಾರೆ. : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಇಬ್ಬರನ್ನು ವಶಕ್ಕೆ ಪಡೆದ ಎನ್.ಐ.ಎ ತಂಡ

spot_img
- Advertisement -
- Advertisement -

ಬೆಳ್ಳಾರೆ : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮತ್ತಿಬ್ಬರನ್ನು ವಶಕ್ಕೆ ಪಡೆದು ಬೆಂಗಳೂರಿನ ಎನ್.ಐ.ಎ  ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ಳಾರೆಯಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೊಹಿದ್ದಿನ್ ಅವರ ಮಗ ಶಾಹಿದ್(40) ಮತ್ತು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೋಳಿ ಲೈನ್ ಸೆಲ್ ಕೆಲಸ ಮಾಡುತ್ತಿರುವ ಜಾಬಿರ್ ಅರಿಯಡ್ಕ (35) ಎಂಬಾತನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿನ ಎನ್.ಐ.ಎ ಕಚೇರಿಗೆ ತನಿಖೆ ಕರೆದೊಯ್ಯುದ್ದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ವಾರದ ಹಿಂದೆ ಎನ್.ಐ.ಎ ಅಧಿಕಾರಿಗಳಿಂದ ಬಂಧಿತನಾಗಿರುವ ನಿಷೇಧಿತ ಪಿಎಫ್ಐ ಮುಖಂಡನಾಗಿದ್ದ ಶಾಫಿ ಬೆಳ್ಳಾರೆಯ ಭಾವ ಶಾಹಿದ್ ಎಂಬಾತನಾಗಿದ್ದಾನೆ‌.

ಶಾಹಿದ್

ಎನ್.ಐ.ಎ ಅಧಿಕಾರಿಗಳು ಇಬ್ಬರನ್ನು ಅವರ ಮನೆಯಿಂದ ವಶಕ್ಕೆ ಪಡೆದು ಬೆಂಗಳೂರಿನಲ್ಲಿ ವಿಚಾರಣೆ ನಡೆಸುತ್ತಿದ್ದು ನಂತರ ಪ್ರಕರಣ ಸಂಬಂಧ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಬ್ಬರು ಕೂಡ ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರನ್ನು ಬಂಧನವಾದ್ರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 15 ಮಂದಿಯ ಬಂಧನವಾಗಲಿದೆ.

ಈ ಬಗ್ಗೆ ಅಧಿಕೃತವಾಗಿ ಇನ್ನೆರಡು ದಿನದಲ್ಲಿ ಎನ್.ಐ.ಎ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಹೊರಡಿಸಲಿದೆ.

- Advertisement -
spot_img

Latest News

error: Content is protected !!