- Advertisement -
- Advertisement -
ನಿಡ್ಲೆ: ಮೈಸೂರಿನ ಕೆ.ಆರ್ ನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಡ್ಲೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಎಂ(44 ವ) ರವರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೂಲತಃ ಕೊಳ್ಳೆಗಾಲ ನಿವಾಸಿಯಾದ ಸುರೇಶ್ ಎಂ ರವರು ಕಳೆದ 9 ತಿಂಗಳಿನಿಂದ ನಿಡ್ಲೆ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜ7 ರಂದು ನಿಡ್ಲೆಯಿಂದ ತಮ್ಮ ಊರಿಗೆ ತೆರಳಿದ್ದರು.
ಜ.9 ರಂದು ಸಂಜೆ ತಮ್ಮ ಊರಿನಿಂದ ತಮ್ಮ ಬೈಕಿನಲ್ಲಿ ನಿಡ್ಲೆಗೆ ವಾಪಸ್ ಬರುತ್ತಿದ್ದ ವೇಳೆ ಮೈಸೂರಿನ ಕೆ.ಆರ್ ನಗರದ ಬಳಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
- Advertisement -