Monday, May 6, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ನಿರ್ಬಂಧ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಎರಡು ದಿನ ನಿರ್ಬಂಧ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದು, ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಜುಲೈ 29 ರಂದು ಫಾಜಿಲ್ ಹತ್ಯೆಯ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಗರ ಪೊಲೀಸ್ ಅಧಿಕಾರಿಗಳ ಮನವಿಗೆ ಮೇರೆಗೆ ಆಗಸ್ಟ್ 4 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಜಿಲ್ಲಾಡಳಿತ ಆದೇಶಿಸಿದೆ.

ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು ಲಭ್ಯವಿರುತ್ತವೆ. ಪೊಲೀಸರು ಜಿಲ್ಲಾ ಗಡಿಗಳಲ್ಲಿ ಮತ್ತು ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ, ಸಾಮಾಜಿಕ ತಾಣಗಳ ಮೇಲೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ.

- Advertisement -
spot_img

Latest News

error: Content is protected !!