Friday, June 27, 2025
Homeತಾಜಾ ಸುದ್ದಿನಾನು ಸತ್ತು ಹೋಗಿಲ್ಲ..ಎಲ್ಲಿಯೂ ಓಡಿ ಹೋಗಿಲ್ಲ: ಸಮಾಧಿ ಸ್ಥಿತಿ ತಲುಪಿದ್ದೇನೆ: ಫೇಸ್‌ ಬುಕ್‌ ನಲ್ಲಿ ಸಂದೇಶ...

ನಾನು ಸತ್ತು ಹೋಗಿಲ್ಲ..ಎಲ್ಲಿಯೂ ಓಡಿ ಹೋಗಿಲ್ಲ: ಸಮಾಧಿ ಸ್ಥಿತಿ ತಲುಪಿದ್ದೇನೆ: ಫೇಸ್‌ ಬುಕ್‌ ನಲ್ಲಿ ಸಂದೇಶ ಬರೆದ ನಿತ್ಯಾನಂದ

spot_img
- Advertisement -
- Advertisement -

ರಾಮನಗರ: ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿ ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ನಿರಂತರ ಧ್ಯಾನದಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೈಲಾಸ ಪೀಠ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಈ ಸಂಬಂಧ ಪೋಸ್ಟ್ ಹಾಕಲಾಗಿದ್ದು, ಅಲ್ಲಿ ನಿತ್ಯಾನಂದರ ಸಂದೇಶಗಳನ್ನು ಬರೆಯಲಾಗಿದೆ. ನಿತ್ಯಾನಂದ ಕೈ ಬರಹ ಇರುವ ಫೋಟೊ ಸಹ ಇದೆ. ‘ನಾನು ಸದ್ಯ ಸಮಾಧಿ ಸ್ಥಿತಿ ತಲುಪಿದ್ದು, ಮತ್ತೆ 2026ರ ವೇಳೆಗೆ ಲೌಕಿಕ ಜಗತ್ತಿನ ಚಟುವಟಿಕೆಗಳಿಗೆ ಹಿಂತಿರುಗುತ್ತೇನೆ’ ಎಂದು ಬರೆದಿದ್ದಾರೆ.

ನಾನು ಈಗಾಗಲೇ ಸತ್ತು ಹೋಗಿದ್ದೇನೆ ಎಂದು ಕೆಲವರು ಸುದ್ದಿ ಹಬ್ಬಿಸಿದ್ದಾರೆ. ಅದೆಲ್ಲ ಸುಳ್ಳು. ನಾನು ಸತ್ತು ಹೋಗಿಲ್ಲ. ಎಲ್ಲಿಯೂ ಓಡಿ ಹೋಗಿಲ್ಲ. ಈಗಲೂ 27 ವೈದ್ಯರ ತಂಡ ನನ್ನನ್ನು ನೋಡಿಕೊಳ್ಳುತ್ತಿದೆ. ಸಮಾಧಿ ಸ್ಥಿತಿಯಲ್ಲಿದ್ದರೂ ನಿತ್ಯ ಶಿವ ಪೂಜೆ ಮಾಡುವುದನ್ನು ಬಿಟ್ಟಿಲ್ಲ. ಆದರೆ ನೀರು-ಆಹಾರ ಸ್ವೀಕರಿಸುತ್ತಿಲ್ಲ’ ಎಂದೂ ನಿತ್ಯಾನಂದ ಸ್ಪಷ್ಟನೆ ನೀಡಿದ್ದಾರೆ.

- Advertisement -
spot_img

Latest News

error: Content is protected !!