ಬೆಂಗಳೂರು; ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಪಾಲಾದ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿ 6106 ನ್ನು ನೀಡಲಾಗಿದೆ.
ಇನ್ನು ಉಳಿದ ಮೂವರು ಆರೋಪಿಗಳಲ್ಲಿ ಧನರಾಜ್ಗೆ 6107, ವಿನಯ್ಗೆ 6108, ಪ್ರದೂಶ್ಗೆ 6109 ಸಂಖ್ಯೆಗಳನ್ನು ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ದರ್ಶನ್ ಅನ್ನು ವಿಶೇಷ ಬ್ಯಾರಕ್ನಲ್ಲಿ ಇರಿಸಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ಮೂರು ವಿಶೇಷ ಬ್ಯಾರಕ್ಗಳಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್ ಅನ್ನು ಮೂರನೇ ಬ್ಯಾರಕ್ನಲ್ಲಿ ಇರಿಸಲಾಗಿದೆ.
ಎರಡು ದಿನದ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರದ ಮಹಿಳಾ ವಿಭಾಗದ ಡಿ ಬ್ಯಾರಕ್ನಲ್ಲಿ ಇರಿಸಲಾಗಿದೆ. ಪವಿತ್ರಾಗೆ 6024 ಸಂಖ್ಯೆಯನ್ನು ನೀಡಲಾಗಿತ್ತು. ಇಂದು ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಆರೋಪಿಗಳಿಗೆ ಇಂದು ಸೇರಿದಂತೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜುಲೈ 4 ರವರೆಗೆ ದರ್ಶನ್ ಮತ್ತು ಗ್ಯಾಂಗ್ ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿದೆ.


