Wednesday, May 15, 2024
Homeಕರಾವಳಿಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ : ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ-...

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ : ಕಾಸರಗೋಡಿಗೆ ಸರ್ಕಾರಿ, ಖಾಸಗಿ ಬಸ್ ಸಂಚಾರವಿಲ್ಲ- ನಳೀನ್ ಕುಮಾರ್ ಕಟೀಲು

spot_img
- Advertisement -
- Advertisement -

ಮಂಗಳೂರು : ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ಹೇಳಿದ್ದಾರೆ,

ಇಂದು  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೊನಾ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದಿದ್ದಾರೆ.

ಅಲ್ಲದೇ, ಆಗಸ್ಟ್ 1 ರಿಂದ 7 ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡುಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು, ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು, ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್‍ನಲ್ಲಿಯೇ ಇರಬೇಕು,  ಪ್ರತಿ ದಿನ ಅವರುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ  ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ತಪಾಸಣೆಗೆ ಮತ್ತಷ್ಟು ಕ್ರಮಕೈಗೊಳ್ಳಬೇಕು, ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ದಾಖಲಿಸಬೇಕು,  ಸೋಂಕಿತರು ಅನಗತ್ಯವಾಗಿ ಓಡಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು, ಒಂದೇ ಕುಟುಂಬದಲ್ಲಿ 2 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಪರಿಗಣಿಸಬೇಕು ಎಂದರು.

ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್.ಐ.ಆರ್ ದಾಖಲಿಸುವಂತೆ ತಿಳಿಸಿದ ಅವರು, ಇದರ ಬಗ್ಗೆ ನಿಗಾ ವಹಿಸಲು ಹೋಂ ಗಾರ್ಡ್‍ನ್ನು ನಿಯೋಜಿಸಬೇಕು ಎಂದರು.

ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವಂತಹ ಸಾರ್ವಜನಿಕರ ಮೇಲೆ ದಂಡ ವಿಧಿಸಬೇಕು ಹಾಗೂ ಕಡ್ಡಾಯವಾಗಿ ಮಸ್ಕ್ ಧರಿಸುವಂತೆ ತಿಳಿಸಬೇಕು ಮತ್ತು ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು.

ಕೋವಿಡ್ ಸೋಂಕಿತರು ಹೋಂ ಕ್ವಾರಂಟೈನ್‍ನಲ್ಲಿ ಇರುವ ಬಗ್ಗೆ ಸಂಬಂಧಿಸಿದ  ತಹಶೀಲ್ದಾರ್‍ಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಬೇಕು, ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತಹ ಸ್ಥಳಗಳಲ್ಲಿ ಜನಸಂದಣಿ ಕಂಡುಬರುತ್ತಿದ್ದೂ, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ.60 ಆನ್‍ಲೈನ್ ರಿಜಿಸ್ರ್ಟೇಷನ್ ಮತ್ತು ಶೇ.40 ನೇರವಾಗಿ ಹಾಗೂ 18 ವರ್ಷ ಮೇಲ್ಟಟ್ಟವರಿಗೆ ಶೇ. 80 ಆನ್‍ಲೈನ್  ರಿಜಿಸ್ರ್ಟೇಷನ್ ಮತ್ತು ಶೇ. 20 ನೇರವಾಗಿ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದರು.

- Advertisement -
spot_img

Latest News

error: Content is protected !!