Sunday, June 29, 2025
Homeಕರಾವಳಿಉಡುಪಿನಾನು ಬಿಜೆಪಿ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ: ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ

ನಾನು ಬಿಜೆಪಿ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ: ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ

spot_img
- Advertisement -
- Advertisement -

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ಮೆಚ್ಚಿ ಬಿಜೆಪಿಗೆ ಬಂದಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಉಡುಪಿಯಲ್ಲಿ ಇಂದು ಮಾತನಾಡಿದ ಮಧ್ವರಾಜ್, ನಾನಾಗಿ ಬಿಜೆಪಿಯ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ. ಭಾರತೀಯ ಜನತಾ ಪಕ್ಷ ಯಾವುದೇ ಭರವಸೆಗಳನ್ನು ಕೊಟ್ಟಿಲ್ಲ. ಒಬ್ಬ ಕಾರ್ಯಕರ್ತನಾಗಿ ನಾನು ಬಿಜೆಪಿಯಲ್ಲಿ ದುಡಿಯುತ್ತೇನೆ ಎಂದು ಹೇಳಿದ್ದಾರೆ.

2023 ಚುನಾವಣೆಯಲ್ಲಿ 150 ಸೀಟು ಗೆಲ್ಲಿಸಿಕೊಳ್ಳಲು ನಾನು ನನ್ನ ಅಳಿಲು ಸೇವೆಯನ್ನು ಮಾಡುತ್ತೇನೆ ಎಂದಿರುವ ಪ್ರಮೋದ್ ಮಧ್ವರಾಜ್, ರಾಜ್ಯದಲ್ಲಿ ಪಕ್ಷ ಎಲ್ಲಿ ಕೆಲಸ ಮಾಡಲು ಹೇಳುತ್ತದೆ ಅಲ್ಲಿ ಹೋಗಿ ಕೆಲಸ ಮಾಡುತ್ತೇನೆ. ವಿಶೇಷವಾಗಿ ಮೀನುಗಾರರು ಇರುವಂತಹ ಕ್ಷೇತ್ರದಲ್ಲಿ ಹೋಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ನನ್ನ ಹಲವಾರು ಬೆಂಬಲಿಗರು ಬಿಜೆಪಿ ಸೇರಲು ಆಸಕ್ತರಾಗಿದ್ದಾರೆ ಎಂದು ಹೇಳಿರುವ ಪ್ರಮೋದ್ ಮಧ್ವರಾಜ್, ಬಿಜೆಪಿ ಕಾರ್ಯಕರ್ತರ ಮನಸ್ಸನ್ನು ಒಲಿಸಿ, ಓಲೈಸಿ ಅವರ ಒಪ್ಪಿಗೆಯನ್ನು ಪಡೆದು ಬಿಜೆಪಿಗೆ ಸೇರ್ಪಡೆ ಕೆಲಸ ಆಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಶಾಸಕ ರಘುಪತಿ ಭಟ್ ಅವರ ಒಪ್ಪಿಗೆ ಇಲ್ಲದಿದ್ದರೆ ನನಗೆ ಬಿಜೆಪಿಗೆ ಸೇರಲು ಆಗುತ್ತಿರಲಿಲ್ಲ ಎಂದು ಕೂಡಾ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!