Friday, May 3, 2024
Homeತಾಜಾ ಸುದ್ದಿಮುಂದಿನ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಇಲ್ಲ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

ಮುಂದಿನ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಇಲ್ಲ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

spot_img
- Advertisement -
- Advertisement -

ರಾಮನಗರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಫರ್ಧೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಇಂದು ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ನಾನು ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕರೆಯುತ್ತಿದ್ದಾರೆ. ಆದರೆ ನಾನು ಆದರೆ, ನಾನು ಚನ್ನಪಟ್ಟಣದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.

ನಾನು ಯಾರಿಗೋ ಹೆದರಿ ರಾಮನಗರ ಬಿಟ್ಟು ಹೋಗುವ ಮಗ ಅಲ್ಲ. ನಾನು ದೇವೇಗೌಡರ ಕುಟುಂಬದಲ್ಲಿ ಹುಟ್ಟಿರೋದು. ಎಲ್ಲದಕ್ಕೂ ಹೋರಾಟ ಮಾಡುವ ಶಕ್ತಿ ನಮ್ಮ ಅಪ್ಪ ನನಗೆ ಕೊಟ್ಟಿದ್ದಾರೆ. ನಾನು ಚನ್ನಪಟ್ಟಣದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ರಾಜ್ಯದ 120ಕ್ಕೂ ಹೆಚ್ಚು ಕಡೆ ನಾನು ಸಂಚಾರ ಮಾಡಬೇಕು. ನನ್ನ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸುತ್ತಾರೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು..

- Advertisement -
spot_img

Latest News

error: Content is protected !!