- Advertisement -
- Advertisement -
ಹುಬ್ಬಳ್ಳಿ: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಮಾಡುವ ಯೋಚನೆಯನ್ನು ನಮ್ಮ ಸರ್ಕಾರ ಅಥವಾ ಪಕ್ಷ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಬಸವರಾಜ ಬೊಮ್ಮಾಯಿ, ಜನರಿಗೆ ನಮ್ಮ ಕಾರ್ಯಕ್ರಮ ಮುಟ್ಟಿಸಿ, ಆ ವರದಿಯ ಆಧಾರದ ಮೇಲೆ ಸಕಾರಾತ್ಮಕ ಜನಾದೇಶ ಪಡೆಯಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಅಲ್ಲದೇ, ಬಹುಶಃ ಕಾಂಗ್ರೆಸ್ ಗೆ ಸಮಯ ಕೊಟ್ಟಷ್ಟು ಅವರ ಒಳಜಗಳ ಹೆಚ್ಚಾಗುತ್ತದೆ ಎಂದು ಅಭದ್ರತೆ ಕಾಡುತ್ತಿದೆ. ಚುನಾವಣೆ ಮುಂಚೆಯಾಗುತ್ತದೆ ಜಗಳವಾಡಬೇಡಿ ಎಂದು ಕಾಂಗ್ರೆಸ್ ನ ಕಾರ್ಯಕರ್ತರಿಗೆ ನೀಡಿರುವ ಸಂದೇಶ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
- Advertisement -