ಮಡಿಕೇರಿ: ಅಕ್ಟೋಬರ್ 17 ರಂದು ತಲಕಾವೇರಿಯಲ್ಲಿ ತೀರ್ಥೋದ್ಭವವಾಗಲಿದೆ. ಆದರೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಕಾವೇರಿ ತೀರ್ಥೋದ್ಭವದ ವೇಳೆಯಲ್ಲಿ ಭಕ್ತರಿಗೆ ನಿರ್ಬಂಧ ಮಾಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕೆ ಜಾಯ್ ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ
ಜನದಟ್ಟಣೆ ಆಗದಂತೆ ಸಾಂಪ್ರದಾಯಿಕ ವಿಧಿ-ವಿಧಾನಗಳಿಗೆ ಧಕ್ಕೆಯಾಗದಂತೆ ಪೂಜಾ ಕೈಂಕರ್ಯಗಳು ನಡೆಯಲಿದೆ. ಅಷ್ಟೇ ಅಲ್ಲದೇ ಈ ಬಾರಿ ತೀರ್ಥೋದ್ಭವದಲ್ಲಿ ಸ್ವಯಂಸೇವಕರು ಹಾಗೂ ಅರ್ಚಕಗಳಿಗೂ ಕೊರೊನಾ ಟೆಸ್ಟ್ ಕಡ್ಡಾಯ. ಕೊವೀಡ್ ಪರೀಕ್ಷಾ ತಪಾಸಣೆಗೆ ಒಳಗಾಗಿ ನೆಗೆಟಿವ್ ವರದಿ ಬರುವವರಿಗೆ ಕಾರ್ಯಕ್ರಮಕ್ಕೆ ಭಾಗವಹಿಸಲು ಪೊಲೀಸ್ ಇಲಾಖೆ ಪಾಸ್ ನೀಡಲಿದೆ.
ಅಷ್ಟೇ ಅಲ್ಲದೇ ಈ ಬಾರಿ ಅಕ್ಟೋಬರ್ 17 ಮತ್ತು 26 ದಸರಾ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುವುದು. ಪ್ರವಾಸಿಗರು ಸ್ಥಳೀಯರು ಸಹಕಾರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.