Monday, April 29, 2024
Homeಕರಾವಳಿಉಡುಪಿಮೀನು ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್

ಮೀನು ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ನ್ಯೂಸ್

spot_img
- Advertisement -
- Advertisement -

ಉಡುಪಿ : ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಎಲ್ಲಾ ಮೀನುಗಾರಿಕೆ ಚಟುವಟಿಕೆಗಳಿಗೆ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳು ಕರಾವಳಿಯಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿಲಾಯ, ಮೀನುಗಾರಿಕಾ ಇಲಾಖೆಯ ಎಪ್ರಿಲ್ 7ರ ಅಧಿಸೂಚನೆಯಂತೆ ಕರ್ನಾಟಕ ರಾಜ್ಯವೂ ಸೇರಿದಂತೆ ಪಶ್ಚಿಮ ಕರಾವಳಿಯ ಎಲ್ಲಾ ರಾಜ್ಯಗಳ ವಿಶೇಷ ಆರ್ಥಿಕ ವಲಯದ (12ರಿಂದ 200 ನಾಟಿಕಲ್ ಮೈಲಿ) ಜಲಪ್ರದೇಶದಲ್ಲಿ ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ಮೀನುಗಾರಿಕೆಗೆ ನಿಷೇಧ ಹೇರಿ ಏಕರೂಪದ ಮೀನುಗಾರಿಕಾ ನಿಷೇಧವನ್ನು ಜಾರಿಗೊಳಿಸಲಾಗಿದೆ.

ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು, ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1985 ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ, ಒಂದು ವರ್ಷದ ಅವಧಿಗೆ ಡೆಲಿವರಿ ಪಾಯಿಂಟ್‌ನಲ್ಲಿ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ.ಆದ್ದರಿಂದ ಕರಾವಳಿಯ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸುವಂತೆ ಜಿಲ್ಲಾ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!