- Advertisement -
- Advertisement -
ಉಡುಪಿ: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಹಾಗೂ ಸದಾನಂದಗೌಡ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರಹಾಕಿದ್ದಕ್ಕೆ ಪೊಲೀಸರು ಬಂಧಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣವನ್ನು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಖಂಡಿಸಿದ್ದಾರೆ.
ಮಾಧ್ಯಮಗಳೊಂದಿ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಕ್ರಮ ಏನಿದೆ ಅದನ್ನ ತೆಗೆದುಕೊಳ್ಳಲಿ. ಆದ್ರೆ ಹಲ್ಲೆ ಮತ್ತು ದೌರ್ಜನ್ಯ ನಡೆಸುವ ಅಧಿಕಾರ ಯಾರಿಗೂ ಇಲ್ಲ. ಘಟೆ ಸಂಬಂಧ ಸಮಗ್ರ ತನಿಕೆ ಆಗ್ಲೇಬೇಕು ಎಂದು ಆಗ್ರಹಿಸಿದ್ರು.
- Advertisement -