- Advertisement -
- Advertisement -
ಬೆಂಗಳೂರು: ವಕ್ಫ್ ಮಂಡಳಿಯಿಂದ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು ತೆರೆಯುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸ್ಪಷ್ಟೀಕರಣ ನೀಡಿರುವ ಸಿಎಂ ಬೊಮ್ಮಾಯಿ, ಪ್ರತ್ಯೇಕ ಕಾಲೇಜು ಬಗ್ಗೆ ನಮ್ಮ ಸರ್ಕಾರದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.
ಪ್ರತ್ಯೇಕ ಕಾಲೇಜು ತೆರೆಯುವುದು ನಮ್ಮ ಸರ್ಕಾರದ ನಿಲುವು ಕೂಡಾ ಆಗಿಲ್ಲ ಎಂದು ಹೇಳಿರುವ ಸಿಎಂ, ಆ ತರಹದ್ದು ಏನಾದರೂ ಪ್ರಸ್ತಾವನೆ ಇದ್ದರೆ ವಕ್ಫ್ ಬೋರ್ಡ್ ಅಧ್ಯಕ್ಷರೇ ಬಂದು ನನ್ನ ಜತೆ ಚರ್ಚೆ ಮಾಡಲಿ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
- Advertisement -