- Advertisement -
![]()
- Advertisement -
ಬೆಂಗಳೂರು:ರಾಜ್ಯ ಸಚಿವ ಸಂಪುಟದ ಪುನರ್ ರಚನೆ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಪಡೆದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದ ಅವರು,
ಕಾಂಗ್ರೆಸ್ ಸರ್ಕಾರದ ಅವಧಿಯವರೆಗೆ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ನಾನೇ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟ ಪಡಿಸಿದ್ದಾರೆ.
ಇನ್ನೂ ಸಂಪುಟ ಪುನರ್ ರಚನೆ ಆಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯಕ್ಕೆ ಸಂಪುಟ ಪುನರ್ ರಚನೆಯಿಲ್ಲ. ಸಂಪುಟ ಸರ್ಜರಿಯೂ ಇಲ್ಲ. ನಾನೇ ಸಿಎಂ ಹೇಳ್ತಾ ಇದ್ದೀನಿ ಎಂದಿದ್ದಾರೆ.
- Advertisement -


