- Advertisement -
- Advertisement -
ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನಾವಶ್ಯಕವಾದ ಯಾವುದೇ ನಿರ್ಬಂಧ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಎಲ್ಲಾ ರಾಜ್ಯಗಳ ಸಿಎಂ ಜೊತೆಗಿನ ಪ್ರಧಾನಿ ಮೋದಿ ವೀಡಿಯೋ ಕಾನ್ಫರೆನ್ಸ್ ಬಳಿಕ ಮಾತನಾಡಿದ ಸಿಎಂ, ಅವಶ್ಯಕತೆ ಇರುವ ಕಡೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ, ವ್ಯಾಕ್ಸಿನೇಷನ್ ಹೆಚ್ಚಳ ಮಾಡುತ್ತೇವೆ ಎಂದು ಹೇಳಿದ್ದಾರೆ.
೨ ವರ್ಷದಿಂದ ೧೨ ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ಹೆಚ್ಚಳ ಮಾಡಿ, ಎಲ್ಲಾ ಆಸ್ಪತ್ರೆಗಳಲ್ಲಿರುವ ರೋಗಿಗಳಿಗೆ ಟೆಸ್ಟಿಂಗ್ ಮಾಡಲಾಗುತ್ತದೆ, ಜಿಲ್ಲೆಗಳಲ್ಲಿ ಪ್ರತಿನಿತ್ಯ 20 ಸಾವಿರ ಟೆಸ್ಟಿಂಗ್ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
- Advertisement -