- Advertisement -
- Advertisement -
ಬೆಂಗಳೂರು: ಇಂದಿನಿಂದ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯುವ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ಮುಂದಿನ ಏ.4 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಇರಲಿದೆ. ಏ.5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಎಂದು ಚುನಾವಣಾ ಆಯೋಗ ತಿಳಿಸಿದೆ.
ಈ 14 ಕ್ಷೇತ್ರಗಳಲ್ಲಿಯೂ ಚುನಾವಣಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ.ಚುನಾವಣೆ ನಡೆಸಲು ಚುನಾವಣಾ ಆಯೋಗ ಭರದ ಸಿದ್ಧತೆ ನಡೆಸಿದೆ. ನೀತಿ ಸಂಹಿತೆ ಜಾರಿಯಾದ ಹತ್ತು ದಿನದಲ್ಲೇ ಸುಮಾರು 50 ಕೋಟಿ ರೂ ಮೌಲ್ಯದ ಅಕ್ರಮಗಳನ್ನು ಜಪ್ತಿ ಮಾಡಲಾಗಿದೆ.
- Advertisement -