- Advertisement -
- Advertisement -
ಬೆಂಗಳೂರು : ಮಾಜಿ ಶಾಸಕ ವೈ.ಎಸ್ ವಿ ದತ್ತಾಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 42 ನೇ ಎಂಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದು, ಮಾರ್ಚ್ 27 ಕ್ಕೆ ದತ್ತಾರನ್ನು ಕೋರ್ಟ್ ಗೆ ಹಾಜರುಪಡಿಸಬೇಕು ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿಗೆ ಕೋರ್ಟ್ ಸೂಚನೆ ನೀಡಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಸೋಮೇಗೌಡ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಆದರೆ ದತ್ತಾ ಕೋರ್ಟ್ ಗೆ ಗೈರಾದ ಹಿನ್ನೆಲೆ ನ್ಯಾಯಾಧೀಶೆ ಜೆ ಪ್ರೀತ್ ಜಾಮೀನು ರಹಿತ ವಾರೆಂಟ್ ಹೊರಡಿಸಿ ಆದೇಶ ನೀಡಿದ್ದಾರೆ.
- Advertisement -