- Advertisement -
- Advertisement -
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಹಾರ ಅಡುಗೆ ಮಾಡಿರುವ ಆರೋಪ ವ್ಯಕ್ತವಾಗಿದೆ.
ಚಿಕ್ಕಮಗಳೂರು ತಾಲ್ಲೂಕಿನಲ್ಲಿರುವ ದತ್ತಪೀಠದಲ್ಲಿ
ವಿವಾದಿತ ಜಾಗದಲ್ಲಿ ಕೋರ್ಟ್ ಆದೇಶ ಉಲ್ಲಂಘನೆ ಆರೋಪ ಕೇಳಿ ಬಂದಿದೆ.
ಹೋಮ-ಹವನ ನಡೆಯುವ ತಾತ್ಕಾಲಿಕ ಶೆಡ್ ನಲ್ಲಿ ಮಾಂಸಹಾರ ಮಾಡಿದ್ದು, ದತ್ತಪೀಠದಲ್ಲಿ ಗೋರಿ ಪೂಜೆ ಮಾಡಿರುವ ಆರೋಪ ವ್ಯಕ್ತವಾಗಿದೆ.
ಹೋಮ-ಹವನ ನಡೆಯುವ ಸ್ಥಳದಲ್ಲಿ ಬಿರಿಯಾನಿ ಅಡುಗೆ ಮಾಡಿರುವುದಕ್ಕೆ ಹಿಂದೂ ಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಮುಜರಾಯಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಬಿದ್ದಿದೆ.
ವಿವಾದಿತ ದತ್ತಪೀಠದ 300 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಮತ್ತು ಪ್ರಾಣಿಬಲಿಗೆ ನಿಷೇಧವಿದೆ.
- Advertisement -