- Advertisement -
![]()
- Advertisement -
ಬೆಳಗಾವಿ: ಇಟಲಿ ಕಾಂಗ್ರೆಸ್ನ ಒಂದು ನಾಯಿಯೂ ಭಾರತದ ಪರವಾಗಿ ಬೊಗಳಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಇಟಲಿ ಕಾಂಗ್ರೆಸ್ ನಾಯಿಗಳು, ಚೀನಾ ಹಾಗೂ ಪಾಕಿಸ್ತಾನದ ಪರವಾಗಷ್ಟೇ ಬೊಗಳುತ್ತವೆ. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಒಂದು ನಾಯಿಯೂ ಭಾಗವಹಿಸಿಲ್ಲ ಎಂದು ಮಲ್ಲಿಕಾರ್ಜುನ್ ಖರ್ಗೆಯವರು ಹೇಳಿದ್ದಾರೆ. ಆದರೆ ಭಾರತೀಯ ಜನಸಂಘ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದೆ. ಸರ್ವಾಧಿಕಾರಿ ಇಂದಿರಾ ಗಾಂಧಿಯನ್ನು ಕೆಳಗೆ ಇಳಿಸಿದರು. ಖರ್ಗೆಯವರು ಅಂದಿನ ದಿನಮಾನ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.
- Advertisement -


