- Advertisement -
- Advertisement -
ಮಂಗಳೂರು: ”ನಾನು ರಾಜ್ಯಸಭಾ ಸ್ಥಾನದ ಆಕಾಂಕ್ಷಿಯಾಗಿದ್ದೆನೇ ಹೊರತು ವಿಧಾನ ಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿ ಅಲ್ಲ” ಎಂದು ನಗರದ ಖ್ಯಾತ ಹೋಟೆಲ್ ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.
” ಇತ್ತೀಚೆಗೆ ನನಗೆ ರಾಜ್ಯಸಭಾ ಸದಸ್ಯರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ರಾಜ್ಯ ಬಿಜೆಪಿ ಕೋರ್ ಕಮಿಟಿಯು ಹೈಕಮಾಂಡ್ಗೆ ಶಿಫಾರಸು ಮಾಡಿತ್ತು. ಆದರೆ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಇಬ್ಬರು ಹಿರಿಯ ಕಾರ್ಯಕರ್ತರನ್ನು ಹೈಕಮಾಂಡ್ ಈ ಸ್ಥಾನಕ್ಕೆ ಆಯ್ಕೆ ಮಾಡಿದೆ. ನನಗೆ ಇದರ ಬಗ್ಗೆ ಯಾವುದೇ ಬೇಸರ ಇಲ್ಲ ಮತ್ತು ವ್ಯಕ್ತಿಗಿಂತ ಪಕ್ಷ ಮುಖ್ಯ ಎನ್ನುವ ಸಾರ್ವಕಾಲಿಕ ಸತ್ಯವನ್ನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ಒಪ್ಪಿಕೊಂಡು ಹೈಕಮಾಂಡ್ ನಿರ್ಧಾರವನ್ನು ಸ್ವಾಗತಿಸುತ್ತೇನೆ” ಎಂದು ತಿಳಿಸಿದ್ದಾರೆ.
- Advertisement -