Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಗಿರೀಶ್ ಮಟ್ಟಣ್ಣವರ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ

ಬೆಳ್ತಂಗಡಿ : ಗಿರೀಶ್ ಮಟ್ಟಣ್ಣವರ್ ಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ

- Advertisement -
- Advertisement -

ಬೆಳ್ತಂಗಡಿ : ಬಂದೂಕು ಪ್ರಕರಣ ಮತ್ತು ಗಡಿಪಾರು ಆದೇಶ ಪ್ರಕರಣದ ಬಳಿಕ ಕಳೆದ ಒಂದು ತಿಂಗಳಿಂದ ಮಹೇಶ್ ಶೆಟ್ಟಿ ತಿಮರೋಡಿ ತಲೆಮರೆಸಿಕೊಂಡಿರುವಾಗ ತಿಮರೋಡಿ ವಿಚಾರದಲ್ಲಿ ಬೆಳ್ತಂಗಡಿಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಹೊರಗಡೆ ಗಿರೀಶ್ ಮಟ್ಟಣ್ಣವರ್ ಅ.11 ರಂದು ಮಾಧ್ಯಮಗಳ ಜೊತೆ ಮಾತಾನಾಡುವಾಗ ತಿಮರೋಡಿ ಮಹೇಶ್ ಶೆಟ್ಟಿ ಎಲ್ಲೂ ಓಡಿಹೋಗಿಲ್ಲ ,ನಾನು ಈಗ ಉಜಿರೆಯಲ್ಲಿ ಮಾತಾನಾಡಿಕೊಂಡು ಬಂದೆ, ಪೊಲೀಸರಿಗೆ ಸಿಗದೇ ಇದ್ರೆ ನನ್ನ ತಪ್ಪಾ ಎ ಎಂದು ಹೇಳಿಕೆ ನೀಡಿದ್ದರು. ಅದರಂತೆ ಮಾಧ್ಯಮಗಳ ವರದಿ ಆಧರಿಸಿ ಬೆಳ್ತಂಗಡಿ ಪೊಲೀಸರು ಅ.15 ರಂದು ಬೆಂಗಳೂರು ಗಿರೀಶ್ ಮಟ್ಟಣ್ಣವರ್ ನಿವಾಸಕ್ಕೆ ತೆರಳಿ ಅ.18 ಕ್ಕೆ ವಿಚಾರಣೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

- Advertisement -

Latest News

error: Content is protected !!