- Advertisement -
- Advertisement -
ಬೆಂಗಳೂರು: ವರ್ತೂರು ಸಂತೋಷ್ ಬಂಧನಕ್ಕೆ ಸಂಬಂಧಪಟ್ಟಂತೆ ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೂ ನೊಟೀಸ್ ನೀಡಲಾಗಿದೆ.
ಈ ಮೂಲಕ ಹುಲಿ ಉಗುರುಗಳನ್ನು ಎಲ್ಲಿಂದ ಸಂಗ್ರಹಿಸಲಾಗಿದೆ ಎಂಬುದನ್ನು ಕಂಡುಹಿಡಿಯಲು ಅಧಿಕಾರಿಗಳು ಮುಂದಾಗಿದ್ದಾರೆ.
ವರ್ತೂರು ಸಂತೋಷ್ರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ತಡರಾತ್ರಿ ಅರೆಸ್ಟ್ ಮಾಡಿದ್ದರು ಸದ್ಯ ಹದಿನಾಲ್ಕು ದಿನ ನ್ಯಾಯಾಂಗ ಬಂಧನದಲ್ಲಿ ಸಂತೋಷ್ ಇದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ಕೊರಳಿನಲ್ಲಿದ್ದ ಲಾಕೇಟ್ ಹುಲಿಯದ್ದು ಅಂತ ಹೇಳಲಾಗುತ್ತಿದ್ದು, ಸದ್ಯ ಹೆಚ್ಚಿನ ತನಿಖೆ ಮುಂದುವರೆದಿದೆ.
- Advertisement -