Friday, June 27, 2025
Homeಅಪರಾಧಕುಖ್ಯಾತ ರೌಡಿಶೀಟರ್‌ ದಾವೂದ್‌ ಸಿಸಿಬಿ ಪೊಲೀಸ್ ವಶಕ್ಕೆ

ಕುಖ್ಯಾತ ರೌಡಿಶೀಟರ್‌ ದಾವೂದ್‌ ಸಿಸಿಬಿ ಪೊಲೀಸ್ ವಶಕ್ಕೆ

spot_img
- Advertisement -
- Advertisement -

ಮಂಗಳೂರು: ಕುಖ್ಯಾತ ರೌಡಿಶೀಟರ್‌ ದಾವೂದ್ ಅನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ ಧರ್ಮನಗರ ನಿವಾಸಿ ದಾವೂದ್‌(43)ನನ್ನು ತಲಪಾಡಿ ಬಳಿಯಲ್ಲಿ ಬಂಧಿಸಿದ್ದಾರೆ.

ಆರೋಪಿಯನ್ನು ತಲಪಾಡಿ ಬಳಿ ಬಂಧಿಸಲು ತೆರಳಿದ್ದಾಗ ಸಿಸಿಬಿ ಪೊಲೀಸರ ಮೇಲೆ ದಾವೂದ್‌ ಮಾರಕಾಯುಧದಿಂದ ಹಲ್ಲೆ ನಡೆಸಿದ್ದು, ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನರೇಂದ್ರ ಮತ್ತು ಸಿಬಂದಿ ಗಾಯಗೊಂಡಿದ್ದಾರೆ. ಆದರೂ ಪೊಲೀಸರು ದಾವೂದ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಈತ ಟಾರ್ಗೆಟ್‌ ಗ್ರೂಪ್‌ನ ಇಲಿಯಾಸ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಉಳ್ಳಾಲದಲ್ಲಿ ಹಲವು ಕೊಲೆ, ಕೊಲೆಯತ್ನ, ವಸೂಲಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ. 20 ವರ್ಷಗಳ ಹಿಂದೆ ನಡೆದಿದ್ದ ನರಸಿಂಹ ಶೆಟ್ಟಿಗಾರ್‌ ಹತ್ಯೆ ಪ್ರಕರಣದಲ್ಲಿ ಈತ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ. ಇನ್ನು ದಾವೂದ್‌ ವಿರುದ್ಧ ಉಳ್ಳಾಲ, ಬಜಪೆ, ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ವಸೂಲಿ ಸಹಿತ ಒಟ್ಟು 10 ಪ್ರಕರಣಗಳು ದಾಖಲಾಗಿವೆ. ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!