- Advertisement -
- Advertisement -
ಬೆಂಗಳೂರು– ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಆತ್ಮಹತ್ಯೆಗೆ ಯತ್ನಿಸಿ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಪ್ರಕರಣ ದಲ್ಲಿ ಸಧ್ಯ ಸಂತೋಷ್ ಗೆ ಕಾನೂನು ಸಂಕಷ್ಟ ಎದುರಾಗಲಿದೆ ಎಂಬ ಮಾತು ಕೇಳಿ ಬರುತ್ತಿದೆ. ಭಾರತೀಯ ದಂಡ ಸಂಹಿತೆ 309ರ ಪ್ರಕಾರ ಆತ್ಮಹತ್ಯೆ ಯತ್ನ ಅಪರಾಧವಾಗಿದ್ದು ಈಗಾಗಲೇ ಅವರ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಈ ಕಾಯ್ದೆ ಅಡಿಯಲ್ಲಿ ಗರಿಷ್ಠ ಒಂದು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದಾಗಿದೆ. ಐಪಿಸಿ ಸೆಕ್ಷನ್ 309ರ ಪ್ರಕಾರ ದೂರು ದಾಖಲಾದರೆ, ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು ಎಂದು ಅವರು ಸ್ಪಷ್ಟ ಪಡಿಸಬೇಕಾಗುವ ಅನಿವಾರ್ಯತೆ ಎದುರಿಸುತ್ತಾರೆ. ಇದಲ್ಲದೆ ಇವರಿಂದ ಈಗಿನ ಹುದ್ದೆ ಕೈ ತಪ್ಪುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
- Advertisement -