Tuesday, May 14, 2024
Homeತಾಜಾ ಸುದ್ದಿಪಠ್ಯಪುಸ್ತಕ ಪರಿಷ್ಕರಣೆ ವಿವಾದ : ಶಿಕ್ಷಣ ಸಚಿವ ನಾಗೇಶ್ ನಿವಾಸಕ್ಕೆ ಎನ್ ಎಸ್ ಯುಐ ಮುತ್ತಿಗೆ:...

ಪಠ್ಯಪುಸ್ತಕ ಪರಿಷ್ಕರಣೆ ವಿವಾದ : ಶಿಕ್ಷಣ ಸಚಿವ ನಾಗೇಶ್ ನಿವಾಸಕ್ಕೆ ಎನ್ ಎಸ್ ಯುಐ ಮುತ್ತಿಗೆ: ಸಚಿವರ ನಿವಾಸದಲ್ಲಿ ಆರ್ ಎಸ್ ಎಸ್ ಬಟ್ಟೆ ಸುಟ್ಟು ಆಕ್ರೋಶ

spot_img
- Advertisement -
- Advertisement -

ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಖಾಸಗಿ ನಿವಾಸಕ್ಕೆ ಎನ್ ಎಸ್ ಯುಐ ಮುತ್ತಿಗೆ ಹಾಕಿದೆ.

ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಸಚಿವ ನಾಗೇಶ್ ನಿವಾಸಕ್ಕೆ ಮುತ್ತಿಗೆ ಹಾಕಿದ ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಎನ್ಎಸ್‌‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಮುತ್ತಿಗೆ ಯತ್ನ ನಡೆಸಿದ್ದು, ಬಿ.ಸಿ.‌ ನಾಗೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ‌ ನಡೆಸಿದ್ದಾರೆ.

ಪ್ರತಿಭಟನಾಕಾರ ಪೈಕಿ 15 ಎನ್ ಐಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದ್ದು, ಎರಡು ವಾಹನ ವಶಪಡಿಸಿಕೊಳ್ಳಲಾಗಿದೆ.

ಸಚಿವರ ನಿವಾಸದ ಆವರಣದಲ್ಲಿ ಎನ್ ಎಸ್ ಯುಐ ಕಾರ್ಯಕರ್ತರು ಆರ್ ಎಸ್ ಎಸ್ ಬಟ್ಟೆಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎನ್ ಎಸ್ ಯುಐ ಪ್ರತಿಭಟನೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು , ನಾಗೇಶ್ ನಿವಾಸಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!