Monday, May 20, 2024
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಾಲ್ಕನೇ ಆರೋಪಿಯ ಬಂಧನ: ಖುಶಿ ವ್ಯಕ್ತಪಡಿಸಿದ ಪ್ರವೀಣ್ ಪತ್ನಿ ನೂತನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಾಲ್ಕನೇ ಆರೋಪಿಯ ಬಂಧನ: ಖುಶಿ ವ್ಯಕ್ತಪಡಿಸಿದ ಪ್ರವೀಣ್ ಪತ್ನಿ ನೂತನ

spot_img
- Advertisement -
- Advertisement -

ಮಂಗಳೂರು; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್ ನನ್ನು ಹಾಸನದ ಸಕಲೇಶಪುರದಲ್ಲಿ ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ. ಇದಕ್ಕೆ  ಮೃತ ಪ್ರವೀಣ್ ಪತ್ನಿ ನೂತನ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪತಿಯ ಹತ್ಯೆ ಪ್ರಕರಣ ಮುಸ್ತಫಾ ಪೈಚಾರ್​ನೇ ಪ್ರಮುಖ ಆರೋಪಿ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ. ಇಡೀ ದೇಶದಲ್ಲಿ ಇಂತಹ ಪ್ರಕರಣಗಳು ಮತ್ತೆ ನಡೆಯಬಾರದು. ನಮ್ಮ ಕುಟುಂಬದ ಪರವಾಗಿ ಎನ್​ಐಎ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ. ಬಂಧನ ಆಗಿರುವುದು ನಮಗೆಲ್ಲ ತುಂಬಾ ಖುಷಿಯಾಗಿದೆ ಎಂದರು.

ಇನ್ನು ಕೊಲೆಯಾಗಿ ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ಎನ್​ಐಎ ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಎನ್​​ಐಎ ಸಂಸ್ಥೆಯ ಮೇಲೆ ನಂಬಿಕೆ ಇದೆ. ಎಲ್ಲ ಆರೋಪಿಗಳ ಬಂಧನವಾಗುತ್ತೆ. ಈ ಪ್ರಕರಣದ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು. ಎಸ್​ಡಿಪಿಐ, ಪಿಎಫ್​ಐ ಕಾರ್ಯಕರ್ತರು ಮುಂದೆ ಎಂದಿಗೂ ಇಂತಹ ಪ್ರಕರಣಕ್ಕೆ ಕೈ ಹಾಕಬಾರದು ಎಂದು ಅವರು ಆಗ್ರಹಿಸಿದ್ದಾರೆ.

- Advertisement -
spot_img

Latest News

error: Content is protected !!