ಮಂಗಳೂರು; ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿ ಮುಸ್ತಫಾ ಪೈಚಾರ್ ನನ್ನು ಹಾಸನದ ಸಕಲೇಶಪುರದಲ್ಲಿ ಎನ್ ಐ ಎ ಅಧಿಕಾರಿಗಳು ಬಂಧಿಸಿದ್ದಾರೆ. ಇದಕ್ಕೆ ಮೃತ ಪ್ರವೀಣ್ ಪತ್ನಿ ನೂತನ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪತಿಯ ಹತ್ಯೆ ಪ್ರಕರಣ ಮುಸ್ತಫಾ ಪೈಚಾರ್ನೇ ಪ್ರಮುಖ ಆರೋಪಿ. ಅವನನ್ನು ಬಂಧಿಸಿದ್ದಕ್ಕೆ ನಮಗೆ ತುಂಬಾ ಖುಷಿಯಾಗಿದೆ. ಇಡೀ ದೇಶದಲ್ಲಿ ಇಂತಹ ಪ್ರಕರಣಗಳು ಮತ್ತೆ ನಡೆಯಬಾರದು. ನಮ್ಮ ಕುಟುಂಬದ ಪರವಾಗಿ ಎನ್ಐಎ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ. ಬಂಧನ ಆಗಿರುವುದು ನಮಗೆಲ್ಲ ತುಂಬಾ ಖುಷಿಯಾಗಿದೆ ಎಂದರು.
ಇನ್ನು ಕೊಲೆಯಾಗಿ ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ಎನ್ಐಎ ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಎನ್ಐಎ ಸಂಸ್ಥೆಯ ಮೇಲೆ ನಂಬಿಕೆ ಇದೆ. ಎಲ್ಲ ಆರೋಪಿಗಳ ಬಂಧನವಾಗುತ್ತೆ. ಈ ಪ್ರಕರಣದ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು. ಎಸ್ಡಿಪಿಐ, ಪಿಎಫ್ಐ ಕಾರ್ಯಕರ್ತರು ಮುಂದೆ ಎಂದಿಗೂ ಇಂತಹ ಪ್ರಕರಣಕ್ಕೆ ಕೈ ಹಾಕಬಾರದು ಎಂದು ಅವರು ಆಗ್ರಹಿಸಿದ್ದಾರೆ.