ಪಚ್ಚನಾಡಿ ಮಂಗಳೂರಿನಲ್ಲಿ ಘನತ್ಯಾಜ್ಯ ಹೂಳೆತ್ತಲು ರೂಪಿಸಿರುವ ಯೋಜನೆಗೆ ಫೆ.24ರ ಗುರುವಾರದಂದು ನಡೆಯುವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವಂತೆ ಮಾಡಲು ರಾಜ್ಯ ಸರಕಾರ ಎಲ್ಲ ಪ್ರಯತ್ನಗಳನ್ನು ನಡೆಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.
ಪಚ್ಚನಾಡಿ, ಮಂದಾರ, ಕುಡುಪು ಮುಂತಾದ ಪ್ರದೇಶಗಳಲ್ಲಿ ತ್ಯಾಜ್ಯ ಸುರಿಯುತ್ತಿರುವ ಮತ್ತು ಸಮಸ್ಯೆಗಳ ಕುರಿತು ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಸೂಚನೆ ನೀಡಲಾಗಿದೆ. ಈ ಮೊಕದ್ದಮೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು ತಿಳಿಸಿದೆ.
ರಾಜ್ಯದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಹಿಂದಿನ ವಿಚಾರಣೆಯಲ್ಲಿ ನೀಡಲಾದ ಸೂಚನೆಗಳ ಪ್ರಕಾರ ಹಲವು ವರ್ಷಗಳಿಂದ ಸಂಗ್ರಹವಾಗಿರುವ ಹೂಳನ್ನು ತೆರವುಗೊಳಿಸುವ ವಿಚಾರವನ್ನು ರಾಜ್ಯ ಮುಖ್ಯ ಕಾರ್ಯದರ್ಶಿಗಳ ಮುಂದೆ ಮಂಡಿಸಿ ಕ್ರಮಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಎಲ್ಲಾ ಸಂಭವನೀಯತೆಗಳಲ್ಲಿ ಫೆಬ್ರವರಿ 24 ಅಥವಾ ಮುಂದಿನ ಗುರುವಾರ ಕ್ಯಾಬಿನೆಟ್ ಅನುಮೋದನೆ ನೀಡಲಾಗುವುದು ಎಂದು ಅವರು ಪೀಠಕ್ಕೆ ತಿಳಿಸಿದರು. ಈ ಗುರುವಾರದಂದು ಅನುಮತಿ ಪಡೆಯಲು ಗರಿಷ್ಠ ಪ್ರಯತ್ನಗಳನ್ನು ಮಾಡುವಂತೆ ಪೀಠವು ಸೂಚಿಸಿತು.