Friday, September 18, 2026
Homeಕರಾವಳಿಮಂಗಳೂರುತುಳು ಭಾಷೆಗೆ ಅಧಿಕೃತ ಸ್ಥಾನಮಾನ: ರಾಜ್ಯ ಸರ್ಕಾರಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ರಾಜ್ಯ ಸರ್ಕಾರಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ

- Advertisement -
- Advertisement -

ಧರ್ಮಸ್ಥಳ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಾಚೀನ ತುಳು ಭಾಷೆಗೆ ಕರ್ನಾಟಕದ 2nd ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹರ್ಷ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, “ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದೇಶ-ವಿದೇಶಗಳಲ್ಲಿ ನೆಲೆಸಿರುವ ಕೋಟ್ಯಂತರ ತುಳುವರ ಪರವಾಗಿ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಸರ್ಕಾರದ ಈ ನಿರ್ಧಾರವು ಮುಂದಿನ ದಿನಗಳಲ್ಲಿ ತುಳು ಭಾಷೆಯನ್ನು ಸಂವಿಧಾನದ 8th ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆಗೆ ಹೆಚ್ಚಿನ ಬಲ ಮತ್ತು ಸಹಕಾರ ನೀಡಲಿದೆ ಎಂದು ಭಾವಿಸುತ್ತೇನೆ” ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ 2009ರಲ್ಲಿ ಉಜಿರೆಯಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ತುಳು ಸಮ್ಮೇಳನ’ವನ್ನು ಸ್ಮರಿಸಿದ ಅವರು, “ಅಂದು ತುಳು ಭಾಷೆ, ನಾಡು, ನುಡಿ ಮತ್ತು ಸಂಸ್ಕೃತಿಯ ಕುರಿತು ದೇಶದ ಗಮನ ಸೆಳೆಯಲಾಗಿತ್ತು. ಮುಖ್ಯವಾಗಿ ಅಂದು ನಿರ್ಮಿಸಲಾಗಿದ್ದ ‘ತುಳುಗ್ರಾಮ’ದ ಕಲ್ಪನೆಯು ಎಲ್ಲರ ಆಕರ್ಷಣೆಯ ಕೇಂದ್ರವಾಗಿ ಮುಕ್ತ ಪ್ರಶಂಸೆಗೆ ಪಾತ್ರವಾಗಿತ್ತು” ಎಂದು ನೆನಪಿಸಿಕೊಂಡಿದ್ದಾರೆ.

ಕರಾವಳಿ ಜನರ ದಶಕಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ತುಳುನಾಡಿನ ಎಲ್ಲಾ ಭಾಷಾಭಿಮಾನಿಗಳ ಪರವಾಗಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!