- Advertisement -
- Advertisement -
ಆಲಂಕಾರು : ಆಲಂಕಾರು ಶ್ರೀ ಗಣೇಶ ಕಾಂಪ್ಲೆಕ್ಸ್ ನಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 6ನೇ ಶಾಖೆಗೆ ಚಾಲನೆ ಸಿಕ್ಕಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲ ನಾಥ ಸ್ವಾಮೀಜಯವರು ಈ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ್ರು.
ಈ ಕಾರ್ಯಕ್ರಮದಲ್ಲಿ ಪುತ್ತೂರು ಶಾಶಕ ಸಂಜೀವ ಮಠಂದೂರು ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ರು.ಈ ವೇಳೆ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿರುವ ಸಹಕಾರ ಸಂಘಗಳು ಕೇವಲ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದ್ರು. ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಸೇವಾ ಸಂಘದ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಹೆಚ್. ಡಿ. ಶಿವರಾಮ್ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು.
- Advertisement -