- Advertisement -
- Advertisement -
ಕಾರ್ಕಳ: ಗ್ಯಾಸ್ ಗೀಝರ್ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ವೃದ್ಧ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.ಕಾರ್ಕಳ ಕಾರ್ಪೋರೇಶನ್ ಬ್ಯಾಂಕ್ ಎದುರು ವೆಂಕಟರಮಣ ದೇವಸ್ಥಾನದ ಬಳಿಯ ನಿವಾಸಿ ಪ್ರಕಾಶ್ ಮಲ್ಯ(74) ಮೃತ ದುರ್ದೈವಿ.
ಏಪ್ರಿಲ್ 8 ರಂದ ಅವರು ಬೆಳಗಿನ ಜಾವ ಮನೆಯಲ್ಲಿ ಸ್ನಾನ ಮಾಡುತ್ತಿರುವಾಗ ಬಿಸಿ ನೀರಿಗೆ ಅಳವಡಿಸಿದ ಗ್ಯಾಸ್ ಗೀಝರ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಈ ಬೆಂಕಿ ಇವರ ಮೈಗೆ ತಗುಲಿದ್ದು ಇದರಿಂದ ಗಂಭೀರವಾಗಿ ಗಾಯಗೊಂಡ ಇವರು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -