Thursday, April 25, 2024
Homeತಾಜಾ ಸುದ್ದಿಅ. 28 ರಂದು ಕೋಟಿ ಕಂಠಗಳಲ್ಲಿ ಮೊಳಗಲಿದೆ ನಾಡಗೀತೆ: ಕನ್ನಡ ರಾಜ್ಯೋತ್ಸವದ ಆಚರಣೆಗೆ ಅದ್ಧೂರಿ ಸಿದ್ಧತೆ:...

ಅ. 28 ರಂದು ಕೋಟಿ ಕಂಠಗಳಲ್ಲಿ ಮೊಳಗಲಿದೆ ನಾಡಗೀತೆ: ಕನ್ನಡ ರಾಜ್ಯೋತ್ಸವದ ಆಚರಣೆಗೆ ಅದ್ಧೂರಿ ಸಿದ್ಧತೆ: ಸಚಿವ ಸುನಿಲ್‌ ಕುಮಾರ್‌

spot_img
- Advertisement -
- Advertisement -

ಬೆಂಗಳೂರು: ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ಧೂರಿಯಿಂದ ಆಚರಿಸಲು ನಿರ್ಧಾರ ಮಾಡಲಾಗಿದೆ. ಅಕ್ಟೋಬರ್ 28 ರಂದು ನನ್ನ ನಾಡು ನನ್ನ ಹಾಡು ಶೀರ್ಷಿಕೆಯಡಿ ಐತಿಹಾಸಿಕ ಕಾರ್ಯಕ್ರಮ ನಡೆಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯೋಜನೆ ಹಾಕಿಕೊಂಡಿದೆ ಎಂದು ಸಚಿವ ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ರಾಜ್ಯ, ದೇಶ, ವಿದೇಶಗಳಲ್ಲಿರುವ ಕನ್ನಡಿಗರಿಂದ ಏಕಕಾಲದಲ್ಲಿ ಗಾಯನ ನಡೆಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ವಿದ್ಯಾರ್ಥಿಗಳಿಂದಲೂ ಕೋಟಿ ಕಂಠ ಗಾಯನಕ್ಕೆ ಸಹಕಾರ ಬೇಕಾಗಿದೆ ಎಂದು ಹೇಳಿದ್ದಾರೆ. ಅಕ್ಟೋಬರ್ 28 ರಂದು ನಡೆಯಲಿರುವ ಕೋಟಿ ಕಂಠ ಗಾಯನವನ್ನ 1 ಕೋಟಿ ಜನ ಹಾಡಲಿದ್ದಾರೆ ಎಂದು ವಿಕಾಸಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಬೆಳಗ್ಗೆ 11 ಗಂಟೆಗೆ 10 ಸಾವಿರ ಕಡೆಗಳಲ್ಲಿ ಕನ್ನಡದ 6 ಹಾಡುಗಳನ್ನು ಹಾಡಬೇಕು ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!