- Advertisement -
- Advertisement -
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೊದಲ ಬಜೆಟ್ ಗೆ ಮುಹೂರ್ತ ಫಿಕ್ಸ್ ಆಗಿದೆ.
ಮಾರ್ಚ್ 4ರಂದು ಮಧ್ಯಾಹ್ನ 12.30ಕ್ಕೆ 2022-23ನೇ ಸಾಲಿನ ರಾಜ್ಯ ಅಯವ್ಯಯ ಮಂಡನೆಯಾಗಲಿದೆ.
ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಈ ಬಗ್ಗೆ ಸ್ಪಷ್ಟ ಪಡಿಸಿದ್ರು. ಆದ್ರೇ ಮಾರ್ಚ್ 4ರಂದು ಎಷ್ಟು ಗಂಟೆಗೆ ರಾಜ್ಯ ಬಜೆಟ್ ಮಂಡನೆಯಾಗಲಿದೆ ಎನ್ನುವುದು ಖಾತರಿಯಾಗಿರಲಿಲ್ಲ. ಇದೀಗ ಕರ್ನಾಟಕ ವಿಧಾನ ಪರಿಷತ್ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ರಾಜ್ಯ ಬಜೆಟ್ ಮಾರ್ಚ್ 4ರಂದು ಮಧ್ಯಾಹ್ನ 12.30ಕ್ಕೆ ಮಂಡನೆಯಾಗಲಿದೆ ಎಂಬುದಾಗಿ ಸ್ಪಷ್ಟ ಪಡಿಸಿದೆ.
ಮಾರ್ಚ್ 4ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ. ಈ ಬಳಿಕ ಕಲಾಪವನ್ನು ಮತ್ತೆ ಮಾರ್ಚ್ 7ಕ್ಕೆ ಮುಂದೂಡಿಕೆಯಾಗಲಿದೆ ಎಂಬುದಾಗಿ ಪರಿಷತ್ ಕಲಾಪದ ತಾತ್ಕಾಲಿಕ ಪಟ್ಟಿಯಲ್ಲಿ ತಿಳಿಸಲಾಗಿದೆ.
- Advertisement -