- Advertisement -
- Advertisement -
ಕಡಬ: ಭಾರೀ ಮಳೆಯ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಓರ್ವ ಸಾವಿಗೀಡಾಗಿ ಇಬ್ಬರು ಗಾಯಗೊಂಡಿರುವ ಘಟನೆ ಕಡಬದಲ್ಲಿ ನಡೆದಿದೆ.
ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ನಡೆದಿದ್ದು,ಮರಳು ತೆಗೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಸಿಡಿಲು ಬಡಿದ ಪರಿಣಾಮ ಮತ್ತಿಬ್ಬರು ಕಾರ್ಮಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೊಳೆ ಬದಿಯಲ್ಲಿದ್ದ ಶೆಡ್ ನಲ್ಲಿ ಕಾರ್ಮಿಕರು ಇದ್ದ ವೇಳೆಯಲ್ಲಿ ಸಿಡಿಲು ಬಡಿದಿದೆ ಎಂದು ಹೇಳಲಾಗಿದೆ.
- Advertisement -