- Advertisement -
- Advertisement -
ಸುಳ್ಯ : ದೇವರಕೊಲ್ಲಿಯಲ್ಲಿ ಕಾರು ಮತ್ತು ಕಂಟೈನರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದರು. ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಓರ್ವ ಸಾವನ್ನಪ್ಪಿದ್ದಾರೆ.
ಬೆಂಗಳೂರು ಮೂಲದ ರವಿ ಮೃತ ದುರ್ದೈವಿ . ಉಳಿದ ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಂಟೈನರ್ ಲಾರಿ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು.ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಸಾಗುತ್ತಿತ್ತು. ಈ ವೇಳೆ ದೇವರಕೊಲ್ಲಿಯಲ್ಲಿ ಅಪಘಾತ ಸಂಭವಿಸಿತ್ತು.
- Advertisement -