- Advertisement -
- Advertisement -
ಉಪ್ಪಿನಂಗಡಿ: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಂದಿದ್ದ 6 ವಿದ್ಯಾರ್ಥಿನಿಯರನ್ನು ಮೊನ್ನೆ ಅಮಾನತುಗೊಳಿಸಲಾಗಿತ್ತು.
ಇನ್ನು ನಿನ್ನೆ ಹಿಜಾಬ್ ವಿಚಾರದಲ್ಲಿ ಪ್ರಾಶುಂಪಾಲರು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹಿಜಾಬ್ ಧರಿಸಿ ತರಗತಿಯ ಒಳಗೆ ಕುಳಿತಿದ್ದ ಓರ್ವ ವಿದ್ಯಾರ್ಥಿನಿಯನ್ನು ಪ್ರಾಶುಂಪಾಲರು 1 ವಾರದ ಮಟ್ಟಿಗೆ ಅಮಾನತು ಮಾಡಿದ್ದಾರೆ.
ಇನ್ನು ಶಾಸಕರ ನೇತೃತ್ವದಲ್ಲಿ ಸಿಡಿಸಿ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಕಾಲೇಜಿನ ಆವರಣದೊಳಗೆ ಸಮವಸ್ತ್ರದ ಹೊರತಾಗಿ ಯಾವುದೇ ಇತರೆ ಬಟ್ಟೆ ಧರಿಸುವಂತಿಲ್ಲ. ಈ ನಿಯಮವನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಪ್ರಾಶುಂಪಾಲರಿಗೂ ಕೂಡ ಇದೇ ನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ.
- Advertisement -