Saturday, April 27, 2024
Homeಕರಾವಳಿಮಂಗಳೂರು; ಪಿಹೆಚ್ ಡಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್; ಚೈತ್ರಾ ಹೆಬ್ಬಾರ್ ವಿದೇಶಕ್ಕೆ ತೆರಳಿರುವ...

ಮಂಗಳೂರು; ಪಿಹೆಚ್ ಡಿ ವಿದ್ಯಾರ್ಥಿನಿ ನಾಪತ್ತೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್; ಚೈತ್ರಾ ಹೆಬ್ಬಾರ್ ವಿದೇಶಕ್ಕೆ ತೆರಳಿರುವ ಶಂಕೆ

spot_img
- Advertisement -
- Advertisement -

ಮಂಗಳೂರು:  ಪಿಹೆಚ್ ಡಿ ವಿದ್ಯಾರ್ಥಿನಿ ಪುತ್ತೂರು ಮೂಲದ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಇದೀಗ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಪೊಲೀಸರು ಚೈತ್ರಾ ವಿದೇಶಕ್ಕೆ ತೆರಳಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನ ಪುರುಷರಕಟ್ಟೆ ನಿವಾಸಿ ಚೈತ್ರಾ ಹೆಬ್ಬಾರ್ ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿ ಶಾರೂಕ್ ಶೇಖ್ ಸ್ನೇಹಿತನ ನೆರವಿನಲ್ಲಿ ವಿದೇಶಕ್ಕೆ ವಿಸಿಟಿಂಗ್ ವೀಸಾದಲ್ಲಿ ಚೈತ್ರಾ ಹೆಬ್ಬಾರ್ ಹಾರಿದ್ದಾಳೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

 ಮಂಗಳೂರಿನ ಉಳ್ಳಾಲ ಕೋಟೆಕಾರು ಮಾಡೂರಿನ ಪಿಜಿಯಿಂದ ಫೆ.17 ಕ್ಕೆ ಪಿಹೆಚ್‌ಡಿ ವಿದ್ಯಾರ್ಥಿನಿ ಚೈತ್ರಾ ಏಕಾಎಕಿ ನಾಪತ್ತೆಯಾಗಿದ್ದಳು. ಫೆ.18 ಕ್ಕೆ ಶಾರೂಕ್ ಶೇಖ್ ಕೂಡಾ ನಾಪತ್ತೆಯಾಗಿದ್ದು ಬಳಿಕ ಇವರು ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ಹಿಮಾಚಲ ಪ್ರದೇಶದ ಮನಾಲಿಗೆ ತೆರಳಿದ್ದರು. ಅಲ್ಲಿಂದ ಬಳಿಕ ದೆಹಲಿ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ಚೈತ್ರಾ ಮಾತ್ರ ಹಾರಿದ್ದಾಳೆ. ಚೈತ್ರಾ‌ ವಿದೇಶಕ್ಕೆ ಹಾರಿದ ಬಳಿಕ ಶಾರೂಕ್ ಶೇಖ್ ನನ್ನು ಪೊಲೀಸರು ಪತ್ತೆ ಹಚ್ಚಿ ವಿಚಾರಣೆಗೆಂದು ಉಳ್ಳಾಲ ಪೋಲೀಸ್‌ ಠಾಣೆಗೆ ಕರೆ ತಂದಿದ್ದರು. ಆದ್ರೆ ಚೈತ್ರಾ ಶಾರೂಕ್ ಜೊತೆ ಇದ್ದ ಎನ್ನುವುದಕ್ಕೆ ಯಾವುದೇ ದಾಖಲೆ ಇಲ್ಲದ ಕಾರಣ ಪೊಲೀಸರು ಶಾರೂಕ್ ನನ್ನು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಆದ್ರೆ ವಿದೇಶದಲ್ಲಿ ಯಾವುದೇ ಸಂಬಂಧಗಳಿಲ್ಲದ ಚೈತ್ರಾಳಿಗೆ ವಿದೇಶದ ವೀಸಾ ಕಳುಹಿಸಿದವರು ಯಾರು ? ವೀಸಾ ಕಳುಹಿಸಿದ ವ್ಯಕ್ತಿಗೂ ಚೈತ್ರಾಳಿಗೂ ಇರುವ ನಂಟೇನು ? ಪೊಲೀಸರಿಗೆ ಈ ಪ್ರಕರಮ ತಲೆನೋವಾಗಿ ಪರಿಣಮಿಸಿದೆ.

- Advertisement -
spot_img

Latest News

error: Content is protected !!