Friday, May 3, 2024
Homeಕರಾವಳಿಸೌಜನ್ಯ ಕುರಿತಾದ ಸಿನಿಮಾ ಮಾಡಲು ಕುಟುಂಬಸ್ಥರಿಂದ ವಿರೋಧ

ಸೌಜನ್ಯ ಕುರಿತಾದ ಸಿನಿಮಾ ಮಾಡಲು ಕುಟುಂಬಸ್ಥರಿಂದ ವಿರೋಧ

spot_img
- Advertisement -
- Advertisement -

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯನ ಕಥೆಯನ್ನು ಸಿನಿಮಾ ಮಾಡಲು ಸಿನಿಮಾ ತಂಡವೊಂದು ನಿರ್ಧರಿಸಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ನೋಂದಾಯಿಸಿತ್ತು. ಇದರ ಬೆನ್ನಲ್ಲೇ ಇದೀಗ ಸಿನಿಮಾವನ್ನು ನಿರ್ಮಿಸುವುದಕ್ಕೆ ಸೌಜನ್ಯ ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಸೌಜನ್ಯಳ ಮಾವ ವಿಠಲ ಗೌಡ, ನಮ್ಮ ಒಪ್ಪಿಗೆ ಪಡೆಯದೇ ಅವರು ಹೇಗೆ ಸಿನಿಮಾ ಮಾಡುತ್ತಾರೆ? ನಮ್ಮನ್ನು ದಾರಿ ತಪ್ಪಿಸುವುದಕ್ಕೆ ಹೀಗೆ ಮಾಡುತ್ತಿದ್ದಾರೆಯೇ?  ನಮ್ಮ ಉದ್ದೇಶ ಸಿನಿಮಾ ಮಾಡುವುದು ಅಲ್ಲ. ನಮಗೆ ನ್ಯಾಯ ಸಿಗಬೇಕು ಅಷ್ಟೇ ಎಂದಿದ್ದಾರೆ. ಅಲ್ಲದೇ ಯಾರಾದರೂ ಸಿನಿಮಾ ಮಾಡುವುದಕ್ಕೆ ಮುಂದಾದರೆ ಹೈಕೋರ್ಟ್ ನಿಂದ ಅದಕ್ಕೆ ತಡೆಯಾಜ್ಞೆ ತರುತ್ತೇವೆ ಎಂದಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸೌಜನ್ಯ ಕುಟುಂಬಸ್ಥರು ಸಿನಿಮಾ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!