- Advertisement -
- Advertisement -
ಬೆಂಗಳೂರು: ಕಾರ್ಯಕರ್ತರ ಪರ ಮಾತನಾಡಿದ ಶಾಸಕರನ್ನು ಬಂಧಿಸುವುದು ಎಷ್ಟು ಸರಿ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನಿವಾಸಕ್ಕೆ ಪೊಲೀಸರು ಭೇಟಿ ನೀಡಿದ್ದ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ ಅಶೋಕ್, ವಿಪಕ್ಷ ಸದಸ್ಯರ ಮೇಲೆ ನಿರಂತರವಾಗಿ ಒಂದಲ್ಲ ಒಂದು ಕೇಸ್ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ
ಹರೀಶ್ ಪೂಂಜ ಬಂಧನ ಮಾಡಲು ಹೋಗಿರುವುದು ಖಂಡನೀಯ ಎಂದಿರುವ ವಿಪಕ್ಷ ನಾಯಕ ಅಶೋಕ್, ಶಾಸಕರ ದನಿಯನ್ನು ಅಡಗಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಅಲ್ಲದೇ, ಹೀಗೇ ಮಾಡುತ್ತಾ ಹೋದರೆ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದೂ ಅಶೋಕ್ ಎಚ್ಚರಿಸಿದ್ದಾರೆ.
- Advertisement -