- Advertisement -
- Advertisement -
ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ ಇಂದು ಸಂಜೆ 3.30ಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಘಟಕದ ಅಂಗವಾಗಿ ‘Orange is not just a fruit’ ಎಂಬ ವಿಶೇಷ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಈ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ. ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ.
ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ್ ಎಸ್. ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ.
- Advertisement -