- Advertisement -
- Advertisement -
ಢಾಕಾ: ಹಿಂದೂ ಪುರೋಹಿತ, ಆಧ್ಯಾತ್ಮಿಕ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರನ್ನು ಬಾಂಗ್ಲಾದಲ್ಲಿ ಬಂಧಿಸಲಾಗಿದ್ದು, ಈ ಕುರಿತಂತೆ ಇಡೀ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಚಿನ್ಮಯ್ ಕೃಷ್ಣ ದಾಸ್ ಸೇರಿದಂತೆ ಹದಿನೇಳು ಮಂದಿಯ ಬ್ಯಾಂಕ್ ಖಾತೆಗಳನ್ನು ಮುಂದಿನ 30 ದಿನಗಳವರೆಗೆ ಸ್ಥಗಿತಗೊಳಿಸುವಂತೆ ಬಾಂಗ್ಲಾದೇಶದ ಹಣಕಾಸು ಅಧಿಕಾರಿಗಳು ಆದೇಶ ನೀಡಿರುವುದಾಗಿ ಬಾಂಗ್ಲಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಆದೇಶವನ್ನು ಬಾಂಗ್ಲಾದೇಶ ಹಣಕಾಸು ಗುಪ್ತಚರ ಘಟಕದ (ಬಿಎಫ್ಐಯು) ಆದೇಶದ ಮೇರೆಗೆ ಹೊರಡಿಸಲಾಗಿದ್ದು, ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ಕುರಿತಂತೆ ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ಹಿಂದೂ ನಾಯಕ ಚಿನ್ಮಯ್ ಕೃಷ್ಣ ದಾಸ್ ಬಂಧನ ನ್ಯಾಯ ಸಮ್ಮತವಲ್ಲವೆಂದು, ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
- Advertisement -