Thursday, May 2, 2024
Homeಕರಾವಳಿಬೆಳ್ತಂಗಡಿ : ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಶಿಲದ ಸೂರ್ಯನಾರಾಯಣ್ ರಾವ್ : ಅಂಗಾಂಗ ದಾನದ ಮೂಲಕ...

ಬೆಳ್ತಂಗಡಿ : ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಶಿಲದ ಸೂರ್ಯನಾರಾಯಣ್ ರಾವ್ : ಅಂಗಾಂಗ ದಾನದ ಮೂಲಕ ಮಾದರಿಯಾದ ಆರ್ ಎಸ್ ಎಸ್ ಕಾರ್ಯಕರ್ತ

spot_img
- Advertisement -
- Advertisement -

ಬೆಳ್ತಂಗಡಿ : ಮೆದುಳು ರಕ್ತಸ್ತ್ರಾವದಿಂದಾಗಿ ಮೆದುಳು ನಿಷ್ಕ್ರಿಯಗೊಂಡ ಸಾವನ್ನಪ್ಪಿದ ಬೆಳ್ತಂಗಡಿ ತಾಲೂಕಿನ ಶಿಶಿಲದ ಆರ್ ಎಸ್ ಎಸ್ ಕಾರ್ಯಕರ್ತ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಸೂರ್ಯನಾರಾಯಣ ರಾವ್‌ (44) ಅವರ ಅಂಗಾಂಗ ದಾನ ಮಾಡಲಾಗಿದೆ.


ಎ. 30ರಂದು ಸೂರ್ಯನಾರಾಯಣ್ ರಾವ್ ಅವರನ್ನು ಮಂಗಳೂರಿನ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 1ರಂದು ಮೆದುಳು ನಿಷ್ಕ್ರಿಯ ಗೊಂಡಿತ್ತು. ಕುಟುಂಬದವರ ಒಪ್ಪಿಗೆಯಂತೆ ನಿನ್ನೆ ಅಂಗಾಂಗ ದಾನ ಪ್ರಕ್ರಿಯೆ ನಡೆಯಿತು.


ಲಿವರ್‌ ಅನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ, ಒಂದು ಕಿಡ್ನಿ ಮತ್ತು ಚರ್ಮವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ, ಒಂದು ಕಿಡ್ನಿಯನ್ನು ಎ.ಜೆ. ಆಸ್ಪತ್ರೆಗೆ, ಒಂದು ಕಣ್ಣನ್ನು ಅತ್ತಾವರದ ಕೆಎಂಸಿಗೂ ಮತ್ತೊಂದನ್ನು ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೂ ರವಾನಿಸಲಾಯಿತು. ಅಂಗಾಂಗವನ್ನು ಝೀರೋ ಟ್ರಾಫಿಕ್‌ ಮುಖೇನ ಆಸ್ಪತ್ರೆಗಳಿಗೆ ರವಾನಿಸಲಾಗಿತ್ತು. ಕೆಎಂಸಿ ಆಸ್ಪತ್ರೆಯಿಂದ ಒಂದು ಲಿವರ್‌ ಅನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಯಿತು.


ಕೆಎಂಸಿ ಆಸ್ಪತ್ರೆಯಿಂದ ಮಂಗಳೂರಿ ನಿಂದ ಪೊಲೀಸರ ಸಹಕಾರದಿಂದ ಕೇವಲ 11 ನಿಮಿಷದಲ್ಲಿ ಆಂಬುಲೆನ್ಸ್‌ ಮುಖೇನ ವಿಮಾನ ನಿಲ್ದಾಣಕ್ಕೆ ಲಿವರ್‌ ಅನ್ನು ರವಾನಿಸಲಾಗಿತ್ತು. ಅಂಗಾಂಗ ದಾನ ಪ್ರಕ್ರಿಯೆಗೆ ಮಣಿಪಾಲ ಸಮೂಹ ಸಂಸ್ಥೆಯ ಕೆಎಂಸಿ ಮಂಗಳೂರು, ಮಣಿಪಾಲ ಹಾಗೂ ಬೆಂಗಳೂರು ಆಸ್ಪತ್ರೆಯ ನುರಿತ ತಜ್ಞರು ಹಾಗೂ ಎ.ಜೆ. ಆಸ್ಪತ್ರೆಯ ವೈದ್ಯರ ತಂಡ ಸಹಕರಿಸಿತ್ತು.

- Advertisement -
spot_img

Latest News

error: Content is protected !!