Friday, May 17, 2024
Homeಕರಾವಳಿಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧದ ಬ್ಯಾನರ್ ಅಳವಡಿಕೆ

ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧದ ಬ್ಯಾನರ್ ಅಳವಡಿಕೆ

spot_img
- Advertisement -
- Advertisement -

ಮಂಗಳೂರು: ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಅನ್ಯಧರ್ಮೀಯರಿಗೆ ವ್ಯಾಪಾರ ನಿಷೇಧದ ಬ್ಯಾನರ್ ಅಳವಡಿಕೆ ಮಾಡಲಾಗಿದೆ.

ವಿಶ್ವ ಹಿಂದೂ ಪರಿಷತ್, ಬಜರಂಗದಳ ಶಿವಶಕ್ತಿ ಶಾಖೆ ಕದ್ರಿಯಿಂದ ಬ್ಯಾನರ್ ಅಳವಡಿಸಲಾಗಿದೆ. ಇದೇ ಬ್ಯಾನರ್​ನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಆರೋಪಿಯ ಉಲ್ಲೇಖವೂ ಇರುವುದು ಹಲವರ ಗಮನ ಸೆಳೆದಿದೆ. ‘ಕದ್ರಿ ಮಂಜುನಾಥನ ಜಾತ್ರೆಯಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ’ ಎಂದು ಬ್ಯಾನರ್​ನಲ್ಲಿ ಹೇಳಲಾಗಿದೆ. ‘ಕುಕ್ಕರ್ ಬಾಂಬ್ ಆರೋಪಿಯು ಮೊದಲು ಕದ್ರಿ ದೇವಸ್ಥಾನವನ್ನೇ ಟಾರ್ಗೆಟ್ ಮಾಡಿದ್ದ. ಅಂಥ ಮನಸ್ಥಿತಿ ಇರುವವರಿಗೆ ಮತ್ತು ವಿಗ್ರಹಾರಾಧನೆಯನ್ನು ಹರಮ್ ಎಂದು ನಂಬಿರುವ ಯಾರಿಗೂ ಇಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ’ ಎಂದು ಬ್ಯಾನರ್​ನಲ್ಲಿ ಬರೆಯಲಾಗಿದೆ.

ಕದ್ರಿ ಜಾತ್ರಾ ಮಹೋತ್ಸವವು ಜನವರಿ 14 ರಿಂದ ಜನವರಿ 23ರವರೆಗೆ ನಡೆಯಲಿದೆ. ಒಂಬತ್ತು ದಿನಗಳ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.

- Advertisement -
spot_img

Latest News

error: Content is protected !!