- Advertisement -
- Advertisement -
ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಇಂದು ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ನಿತಿನ್ ಕುಮಾರ್, ಕೌಶಿಕ್ ಡಿ ಶೆಟ್ಟಿ, ನವೀನ್ ಕುಮಾರ್ ರೈ ಹಾಗೂ ಶಶಿಧರ್ ಎಂ. ಅವರು ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ.
ಡಿಸೆಂಬರ್ 14 ರಂದು ಈ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಅವರು ತಿಳಿಸಿದ್ದಾರೆ.
- Advertisement -