Friday, April 26, 2024
Homeಕರಾವಳಿಉಡುಪಿದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆ ಎಂಟು ಗ್ರಾ.ಪಂ. ಕ್ಷೇತ್ರಗಳಿಗೆ ಉಪ ಚುನಾವಣೆ: ಅರ್ಹ ಮತದಾರರಿಗೆ...

ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆ ಎಂಟು ಗ್ರಾ.ಪಂ. ಕ್ಷೇತ್ರಗಳಿಗೆ ಉಪ ಚುನಾವಣೆ: ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ನಾಳೆ ಉಪ ಚುನಾವಣೆ ನಡೆಯಲಿದೆ

ಉಪ ಚುನಾವಣೆ ‌ನಡೆಯುವ ಮತ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ಕೈಗಾರಿಕಾ ಸಂಸ್ಥೆಗಳು, ಸಹಕಾರಿ ಸಂಸ್ಥೆಗಳು, ವ್ಯಾವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು, ಇತರ ಎಸ್ಟಾಬ್ಲಿಷ್ ಮೆಂಟ್ ಗಳಲ್ಲಿನ ಖಾಯಂ ಹಾಗೂ ದಿನಗೂಲಿ ಅರ್ಹ ಮತದಾರರಿಗೆ ನಾಳೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.

ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ತುರ್ತು ಸೇವೆಗಳ ಮೇಲೆ ಇರುವ ನೌಕರರಿಗೆ ರಜೆ ಅನ್ವಯಿಸುವುದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ನ ದೇವಶ್ಯ ಪಡೂರು ಕ್ಷೇತ್ರ, ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯತ್ ನ ಬಡಗ ಉಳಿಪಾಡಿ ಕ್ಷೇತ್ರ, ಎಕ್ಕಾರು ಗ್ರಾಮ ಪಂಚಾಯತ್ ನ ತೆಂಕ ಎಕ್ಕಾರು ಕ್ಷೇತ್ರ ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಾಳೆ ಉಪ ಚುನಾವಣೆ ನಡೆಯಲಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್ ನ ಕಾಲ್ತೋಡು ಕ್ಷೇತ್ರ, ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮ ಪಂಚಾಯತ್ ನ ಯೆಡ್ತಾಡಿ ಕ್ಷೇತ್ರ, ಉಪ್ಪೂರು ಗ್ರಾಮ ಪಂಚಾಯತ್ ನ ಉಪ್ಪೂರು ಕ್ಷೇತ್ರ ಹಾಗೂ ಕಾಪು ತಾಲೂಕಿನ ಮುದರಂಗಡಿ ಗ್ರಾಮ ಪಂಚಾಯತ್ ನ ಪಿಲಾರು ಕ್ಷೇತ್ರಕ್ಕೆ ನಾಳೆ ಉಪ ಚುನಾವಣೆ ನಿಗದಿಯಾಗಿದೆ.

- Advertisement -
spot_img

Latest News

error: Content is protected !!