- Advertisement -
- Advertisement -
ಶ್ರೀನಗರ: ಜಮ್ಮು ಕಾಶ್ಮೀರದ ಪೂಂಚ್ ಹಾಗೂ ಕಥುವಾ ಜಿಲ್ಲೆಗಳಲ್ಲಿ ಪಾಕಿಸ್ತಾನದ ಪಡೆಯಿಂದ ಗುಂಡಿನ ದಾಳಿ ನಡೆದಿದೆ ಪೂಂಚ್ನ ಗಡಿ ನಿಯಂತ್ರಣ ರೇಖೆಯ ಮನಕೋಟ್ ಸೆಕ್ಟರ್ ನಲ್ಲಿ ಮಧ್ಯರಾತ್ರಿ 2.30ರಿಂದ ಶೆಲ್ ದಾಳಿ ಆರಂಭವಾಗಿದೆ.. ಭಾರತೀಯ ಸೇನೆಯಲ್ಲಿ ಯಾವುದೇ ಪ್ರಾಣಹಾನಿ, ಗಾಯಗಳಾಗಿಲ್ಲ.
ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿ ಸಮೀಪದ ಗ್ರಾಮಗಳಲ್ಲಿ ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸಿದೆ. ಅಂತಾರಾಷ್ಟ್ರೀಯ ಗಡಿ ರೇಖೆಯ ಹೀರಾನಗರ್ ಸೆಕ್ಟರ್ನಲ್ಲೂ ರಾತ್ರಿ ಇಡೀ ಗುಂಡಿನ ಚಕಮಕಿ ನಡೆದಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
- Advertisement -