- Advertisement -
- Advertisement -
ಮುಂಬೈ: ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಮಹಾರಾಷ್ಟ್ರದ ಪಾಲ್ಗರ್ನ ಗಡ್ಚಿಂಚಲೆ ಗ್ರಾಮದಲ್ಲಿ ಇಬ್ಬರು ಸಾಧುಗಳು ಹಾಗೂ ಓರ್ವ ಚಾಲಕನ ಮೇಲೆ ನೂರಾರು ಜನರ ಗುಂಪು ಹಲ್ಲೆ ಮಾಡಿ ಕೊಂದು ಹಾಕಿದ್ದ ಘಟನೆಯಲ್ಲಿ ಪ್ರಮುಖ ಆರೋಪಿಗಳಾಗಿ ಜೈಲಿನಲ್ಲಿ ಇರುವ ಐವರಿಗೆ ಕರೊನಾ ಸೋಂಕು ತಗುಲಿದೆ.
ಈ ಪ್ರಕರಣದಲ್ಲಿ ಬಂಧಿಸಲಾಗಿದ್ದ 11 ಮಂದಿ ಆರೋಪಿಗಳನ್ನು ಜೈಲಿನಲ್ಲಿ ಇರಿಸಲಾಗಿತ್ತು. ಅವರನ್ನು ಕರೊನಾ ವೈರಸ್ ಪರೀಕ್ಷೆಗೆ ಒಳಪಡಿಸಿದಾಗ ಐವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಈ ಆರೋಪಿಗಳನ್ನು ವಾಡಾ ಪೊಲೀಸ್ ಠಾಣೆ ಲಾಕಪ್ನಿಂದ ಜಿಲ್ಲಾ ಕಲೆಕ್ಟರೇಟ್ ಸ್ಥಾಪಿಸುವ ತಾತ್ಕಾಲಿಕ ಜೈಲಿಗೆ ಸ್ಥಳಾಂತರಿಸಬೇಕಾಗಿತ್ತು, ಈ ಹಿನ್ನೆಲೆಯಲ್ಲಿ ಆರೋಪಿಗಳ ಗಂಟಲು ದ್ರವದ ಪರೀಕ್ಷೆಯನ್ನು ಮಾಡಿದಾಗ ವೈರಸ್ ಇರುವುದು ಬೆಳಕಿಗೆ ಬಂದಿದೆ.
- Advertisement -