- Advertisement -
- Advertisement -
ಮಂಗಳೂರು: ಮಲಾರ್ ಗ್ರಾಮದ ಪಲ್ಲಿಯಬ್ಬ ಕೊಲೆ ಪ್ರಕರಣ ಸಂಬಂಧ ಐವರು ಆರೋಪಿಗಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ನಿನ್ನೆಯಷ್ಟೇ ಕೋರ್ಟ್ ಐವರು ಆರೋಪಿಗಳನ್ನು ಪ್ರಕರಣದಲ್ಲಿ ದೋಷಿಗಳೆಂದು ಆದೇಶಿಸಿತ್ತು. ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.
ಮಲಾರ್ ಅಕ್ಷರ ನಗರ ನಿವಾಸಿ ಹಂಝ ಅಬ್ಬಾಸ್ (44), ಮಲಾರ್ ಅರಸ್ತಾನ ಸೈಟ್ ನಿವಾಸಿ ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಹಾಗೂ ಅಥಾವುಲ್ಲ ಯಾನೆ ಅಲ್ತಾಫ್ ಶಿಕ್ಷೆಗೊಳಗಾದ ಆರೋಪಿಗಳು.
- Advertisement -