- Advertisement -
- Advertisement -
ಉಡುಪಿ: ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪಾಣಾರ-ನಲಿಕೆ ಸಮುದಾಯದ ಸಮಾವೇಶ ನಡೆಯಿತು.
ಚಲನಚಿತ್ರ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಸಮಾವೇಶದಲ್ಲಿ ಭಾಗಿಯಾಗಿದ್ದರು.
ಇದೇ ವೇಳೆ ಪ್ರಥಮ ಬಾರಿಗೆ ನಡೆದ ಸಮ್ಮೇಳನದಲ್ಲಿ ಪಾಣಾರ-ನಲಿಕೆ ಸಮುದಾಯದ ಹಿರಿಯ ನರ್ತಕರಿಗೆ ಸನ್ಮಾನ ಮಾಡಲಾಯಿತು.
ಸಮಾವೇಶದಲ್ಲಿ ಮಾತನಾಡಿದ ರಿಷಭ್ ಶೆಟ್ಟಿ, ಮುಂದಿನ ಜನ್ಮದಲ್ಲಿ ಪಾಣಾರ ಸಮುದಾಯದಲ್ಲಿ ಜನಿಸುವ ಆಸೆಯಿದೆ, ಪಾಣಾರನಾಗಿ ದೈವದ ಚಾಕರಿ ಮಾಡುವಂತಾಗಲಿ, ಸಮುದಾಯ ಭವನಕ್ಕೆ ಶಕ್ತಿಮೀರಿ ಸರಕಾರಕ್ಕೆ ಮನವರಿಕೆ ಮಾಡುತ್ತೇನೆ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರು ಜೊತೆ ಮಾತನಾಡಿ ಒತ್ತಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.
- Advertisement -